ರೈತ ಪ್ರತಿಭಟನೆಯಲ್ಲಿ ಹಿಂಸೆ | ಯೋಗೇಂದ್ರ ಯಾದವ್, ರಾಕೇಶ್ ಟಿಕಾಯತ್ ಸೇರಿ ಮುಖಂಡರ ವಿರುದ್ಧ ಎಫ್ ಐಆರ್

Prasthutha|

ನವದೆಹಲಿ : ನಿನ್ನೆ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರೈತರು ದೆಹಲಿಯಲ್ಲಿ ನಡೆಸಿದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ತಾಳಿದುದರಿಂದ, ಶಾಂತಿಯುತ ಪ್ರತಿಭಟನೆಯ ಹೊಣೆಹೊತ್ತಿದ್ದ ರೈತ ಮುಖಂಡರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

- Advertisement -

ರೈತರ ಮುಖಂಡರಾದ ಯೋಗೇಂದ್ರ ಯಾದವ್, ದರ್ಶನ್ ಪಾಲ್, ರಾಕೇಶ್ ಟಿಕಾಯತ್ ಸೇರಿದಂತೆ ಪ್ರಮುಖರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರತಿಭಟನೆ ಶಾಂತಿಯುತವಾಗಿ ನಡೆಯುತ್ತದೆ ಎಂದು ಪೊಲೀಸರಿಗೆ ಭರವಸೆ ನೀಡಲಾಗಿತ್ತು. ಆದರೆ, ಪ್ರತಿಭಟನೆ ರೈತ ಮುಖಂಡರ ಕೈ ಮೀರಿದೆ. ಹಿಂಸಾತ್ಮಕ ಪ್ರತಿಭಟನೆಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಈಗಾಗಲೇ ರೈತ ಮುಖಂಡರು ಸ್ಪಷ್ಟನೆ ನೀಡಿದ್ದಾರೆ. ಹೀಗಿದ್ದರೂ, ರೈತ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಲು ಸರಕಾರ ಮುಂದಾಗಿದೆ.

Join Whatsapp