ರೈತರ ಹೋರಾಟ ಬೆಂಬಲಿಸಿ ನಾಳೆಯಿಂದ ಅಣ್ಣಾ ಹಝಾರೆ ಉಪವಾಸ ಸತ್ಯಾಗ್ರಹ

Prasthutha|

ಅಹಮದ್ ನಗರ : ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಝಾರೆ ನಾಳೆಯಿಂದ ಮಹಾರಾಷ್ಟ್ರದ ಅಹಮದ್ ನಗರದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಘೋಷಿಸಿದ್ದಾರೆ.

- Advertisement -

ತಾವಿರುವ ಪ್ರದೇಶಗಳಿಂದಲೇ ರೈತರ ಪರವಾಗಿ ಪ್ರತಿಭಟನೆ ನಡೆಸುವಂತೆ ಅವರು ತಮ್ಮ ಬೆಂಬಲಿಗರನ್ನು ವಿನಂತಿಸಿದ್ದಾರೆ.

ರೈತರ ಪ್ರಮುಖ ಬೇಡಿಕೆಗಳ ಬಗ್ಗೆ ಕಳೆದ ನಾಲ್ಕು ವರ್ಷಗಳಿಂದ ನಾನು ಪ್ರತಿಭಟನೆ ಮಾಡುತ್ತಲೇ ಇದ್ದೇನೆ. ರೈತರ ವಿಷಯಗಳಲ್ಲಿ ಸರಕಾರ ಸರಿಯಾದ ನಿರ್ಧಾರ ಕೈಗೊಳ್ಳುತ್ತಿಲ್ಲ. ರೈತರ ಬಗ್ಗೆ ಸರಕಾರ ಸೂಕ್ಷ್ಮತೆಯನ್ನು ಹೊಂದಿಲ್ಲ ಎಂದು ಅಣ್ಣಾ ಹಝಾರೆ ತಿಳಿಸಿದ್ದಾರೆ.  

Join Whatsapp
Exit mobile version