ರೈತ ಕ್ರಾಂತಿ | ಸಿಂಘು ಗಡಿಗೆ ಇಂದು ಶಿವಸೇನಾ ಸಂಸದ ಸಂಜಯ್ ರಾವತ್ ಭೇಟಿ

Prasthutha|

ನವದೆಹಲಿ : ಕಳೆದ ನವೆಂಬರ್ ನಿಂದ ಕೇಂದ್ರ ಸರಕಾರದ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಶಿವಸೇನೆ ಸಂಸದ ಸಂಜಯ್ ರಾವತ್ ಇಂದು ಭೇಟಿ ನೀಡಲಿದ್ದಾರೆ. ದೆಹಲಿ-ಹರ್ಯಾಣ ಗಡಿ ಸಿಂಘುವಿನಲ್ಲಿ ಪ್ರತಿಭಟನಾ ನಿರತರಾದ ರೈತರನ್ನು ಬೇಟಿಯಾಗಲು ರಾವತ್ ನಿರ್ಧರಿಸಿದ್ದಾರೆ.

- Advertisement -

ಮಹಾರಾಷ್ಟ್ರ ಸಿಎಂ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಸಲಹೆ ಮೇರೆಗೆ ರಾವತ್ ಈ ನಿರ್ಧಾರ ಕೈಗೊಂಡಿದ್ದಾರೆ.

ಕೇಂದ್ರದ ಬಿಜೆಪಿ ಸರಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ, 70 ದಿನಗಳಿಂದ ರೈತರು ದೆಹಲಿ ಗಡಿ ಪ್ರದೇಶಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ರಾತ್ರಿ ಹಗಲು, ಕೊರೆವ ಚಳಿಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸುತ್ತಿದ್ದಾರೆ.

Join Whatsapp