Home ಟಾಪ್ ಸುದ್ದಿಗಳು ರೈತ ಕ್ರಾಂತಿ | ಸಿಂಘು ಗಡಿಗೆ ಇಂದು ಶಿವಸೇನಾ ಸಂಸದ ಸಂಜಯ್ ರಾವತ್ ಭೇಟಿ

ರೈತ ಕ್ರಾಂತಿ | ಸಿಂಘು ಗಡಿಗೆ ಇಂದು ಶಿವಸೇನಾ ಸಂಸದ ಸಂಜಯ್ ರಾವತ್ ಭೇಟಿ

ನವದೆಹಲಿ : ಕಳೆದ ನವೆಂಬರ್ ನಿಂದ ಕೇಂದ್ರ ಸರಕಾರದ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಶಿವಸೇನೆ ಸಂಸದ ಸಂಜಯ್ ರಾವತ್ ಇಂದು ಭೇಟಿ ನೀಡಲಿದ್ದಾರೆ. ದೆಹಲಿ-ಹರ್ಯಾಣ ಗಡಿ ಸಿಂಘುವಿನಲ್ಲಿ ಪ್ರತಿಭಟನಾ ನಿರತರಾದ ರೈತರನ್ನು ಬೇಟಿಯಾಗಲು ರಾವತ್ ನಿರ್ಧರಿಸಿದ್ದಾರೆ.

ಮಹಾರಾಷ್ಟ್ರ ಸಿಎಂ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಸಲಹೆ ಮೇರೆಗೆ ರಾವತ್ ಈ ನಿರ್ಧಾರ ಕೈಗೊಂಡಿದ್ದಾರೆ.

ಕೇಂದ್ರದ ಬಿಜೆಪಿ ಸರಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ, 70 ದಿನಗಳಿಂದ ರೈತರು ದೆಹಲಿ ಗಡಿ ಪ್ರದೇಶಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ರಾತ್ರಿ ಹಗಲು, ಕೊರೆವ ಚಳಿಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸುತ್ತಿದ್ದಾರೆ.

Join Whatsapp
Exit mobile version