Home ಟಾಪ್ ಸುದ್ದಿಗಳು ವಕೀಲರ ಮೇಲೆ ಮಾರಣಾಂತಿಕ ಹಲ್ಲೆ| ಮೂವರ ಬಂಧನ

ವಕೀಲರ ಮೇಲೆ ಮಾರಣಾಂತಿಕ ಹಲ್ಲೆ| ಮೂವರ ಬಂಧನ

ಮುಂಬೈ: ವಕೀಲರೊಬ್ಬರನ್ನು ಗುಂಪೊಂದು ದೊಣ್ಣೆ ಮತ್ತು ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದು, ಮೂವರನ್ನು ಪೊಲೀಸರು ಬಂಧಿಸಲಾಗಿದೆ.

ಹಿಂಸಾಚಾರದಿಂದ ಗಂಭೀರ ಗಾಯಗೊಂಡ ವಕೀಲರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರು ವಕೀಲರನ್ನು ರಕ್ಷಿಸಲು ಪ್ರಯತ್ನಿಸಿದರೂ ದುಷ್ಕರ್ಮಿಗಳು ಮಚ್ಚು ಮತ್ತು ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಂಎಚ್‌ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು, ಆಸ್ತಿ ವಿವಾದ ವಕೀಲರ ಮೇಲೆ ಹಲ್ಲೆ ನಡೆಸಲು ಕಾರಣ ಎಂದು ತಿಳಿದುಬಂದಿದೆ.

ವೀಡಿಯೋ ವೀಕ್ಷಿಸಿ….

Join Whatsapp
Exit mobile version