ತಂದೆ ಆತ್ಮಹತ್ಯೆ: ನೊಂದ ಮಗ ನೇಣಿಗೆ ಶರಣು

Prasthutha|

ಮೈಸೂರು: ತಂದೆಯು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ನೊಂದ ಮಗ ನೇಣಿಗೆ ಶರಣಾಗಿರುವ ದಾರುಣ ಘಟನೆ ಹೆಚ್.ಡಿ. ಕೋಟೆ ತಾಲೂಕಿನ ಜಕ್ಕಳ್ಳಿ ಕಾಲೋನಿಯಲ್ಲಿ ನಡೆದಿದೆ.

- Advertisement -


ಜಕ್ಕಳ್ಳಿಯ ತಂದೆ ನಾಗೇಗೌಡ (55), ಮಗ ಮಧು(24) ಆತ್ಮಹತ್ಯೆ ಮಾಡಿಕೊಂಡವರು.


ಮನೆಯಲ್ಲಿ ತಂದೆ ನಾಗೇಗೌಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ವಿಚಾರ ತಿಳಿದು ಅಘಾತಗೊಂಡ ಮಗ ಮಧು ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp