ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದುವೆಯಾಗಿದ್ದಾರೆ: ಚಲುವರಾಯಸ್ವಾಮಿ ವ್ಯಂಗ್ಯ

Prasthutha|

ಮಂಡ್ಯ: ಮಂಡ್ಯದಿಂದ ಸಿಎಸ್‌ ಪುಟ್ಟರಾಜು ಅಭ್ಯರ್ಥಿ ಎಂದು ಹೇಳಿ ಇದೀಗ ಕುಮಾರಸ್ವಾಮಿಯವರೇ ಅಭ್ಯರ್ಥಿಯಾಗಿದ್ದಾರೆ. ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದುವೆ ಆದಂತೆ ಆಗಿದೆ ಎಂದು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧಿಸುವ ವಿಚಾರವಾಗಿ ಸಚಿವ ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ.

- Advertisement -

ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಚೆಲುವರಾಯಸ್ವಾಮಿ, ಮೊದಲು ಮಂಡ್ಯ ಕ್ಷೇತ್ರಕ್ಕೆ ಸಿಎಸ್‌ ಪುಟ್ಟರಾಜು ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗಾಡ್ತಿದ್ರು. ಇದೀಗ ತಾವೇ ಅಭ್ಯರ್ಥಿ ಆಗಿದ್ದಾರೆ. ಒಳ್ಳೇ ಹುಡುಗಿ ಇದ್ದಾಳೆ ನಾನೇ ಮದುವೆ ಆಗ್ತೇನೆ. ಪುಟ್ಟರಾಜು ನಿನಗೆ ಮುಂದೆ ಒಳ್ಳೆ ಹುಡುಗಿ ಹುಡುಕೋಣ ಅಂದಿದ್ದಾರೆ ಎಂದು ಹೇಳುವಾಗ ಸಭೆಯಲ್ಲಿ ನಗುವಿನ ಅಲೆಗಳು ಎದ್ದಿದೆ.

ಕಳೆದ ಚುನಾವಣೆಯಲ್ಲಿ ಸುಮಲತಾರನ್ನು ಇದೇ ಕುಮಾರಸ್ವಾಮಿ ನಿಂದಿಸಿದ್ದರು. ಈಗ ಸುಮಲತಾ ನನ್ನ ಸಹೋದರಿ ಇದ್ದಂಗೆ, ಅಕ್ಕ ಇದ್ದಂಗೆ ಅಂತಿದ್ದಾರೆ. ಕಳೆದ ಚುನಾವಣೆಯಲ್ಲಿ ಈ ಮಾತು ಆಡಬೇಕಿತ್ತು. ಸುಮಲತಾ ನನ್ನ ಸಹೋದರಿ ಅಲ್ವಾ ಅವರೇ ಗೆಲ್ಲಲಿ, ನನ್ನ ಮಗ ಗೆದ್ದರೂ ಒಂದೇ, ಅಕ್ಕ ಸುಮಲತಾ ಗೆದ್ದರೂ ಒಂದೇ ಎಂದಿದ್ರೆ ಪಾಪ ಅಂಬರೀಶ್ ಅವರ ಆತ್ಮಕ್ಕೆ ಶಾಂತಿ ಸಿಗುತ್ತಿತ್ತು. ಆದರೆ ಅಂದು ಬಾಯಿಗೆ ಬಂದಂತೆ ಮಾತಾಡಿದರು. ವೈಯಕ್ತಿಕ ತೇಜೋವಧೆ ಮಾಡಿದರು. ಈಗ ಬಿಜೆಪಿ ಜೆಡಿಎಸ್ ಮೈತ್ರಿ ಆದ ಬಳಿಕ ಸುಮಲತಾ ಸಹೋದರಿ ಅಂತಾ ಹೇಳುತ್ತಿದ್ದಾರೆ ಎಂದು ಕುಮಾರಸ್ವಾಮಿ ವಿರುದ್ಧ ವ್ಯಂಗ್ರಮಿಶ್ರಿತವಾಗಿ ತೀವ್ರ ದಾಳಿ ನಡೆಸಿದರು.

Join Whatsapp