ಫಾಝಿಲ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು

Prasthutha|

ಮಂಗಳೂರು: ದ.ಕ.ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.

- Advertisement -

ಪ್ರಕರಣದ ಆರೋಪಿಗಳಾದ ಅಜಿತ್ ಕ್ರಾಸ್ತಾ, ಶ್ರೀನಿವಾಸ್ ಗೆ ಜಾಮೀನು ಆಗಿದೆ.

ಕಳೆದ ವರ್ಷ ಜುಲೈ 28 ರಂದು ರಾತ್ರಿ ಮಂಗಳೂರು ಬಳಿಯ ಸುರತ್ಕಲ್ ನಲ್ಲಿ ಫಾಝಿಲ್ ಹತ್ಯೆ ನಡೆದಿತ್ತು. ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

- Advertisement -

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದರು. ಆ ಪೈಕಿ ಹರ್ಷಿತ್‌ ಎಂಬಾತನಿಗೆ ನ್ಯಾಯಾಲಯವು ಸೆ.7, 2022ರಂದು ಜಾಮೀನು ಮಂಜೂರು ಮಾಡಿತ್ತು.

Join Whatsapp