ಪರೀಕ್ಷೆಯಲ್ಲಿ ನಕಲು ಮಾಡುವ ಆತಂಕ| ಈ ಮೂರು ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ!

Prasthutha|

ಬಿಕಾನೇರ್: ಪಟ್ವಾರಿ ನೇಮಕಾತಿ ಪರೀಕ್ಷೆ ಹಿನ್ನೆಲೆಯಲ್ಲಿ ರಾಜಸ್ಥಾನದ ಬಿಕಾನೇರ್,ಜೈಪುರ ಮತ್ತು ದೌಸಾ ಜಿಲ್ಲೆಗಳಲ್ಲಿ ಇಂಟರ್‌ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಕಡಿತಗೊಳಿಸಲಾಗಿದೆ.

- Advertisement -

ಇಂಟರ್ನೆಟ್ ಸೇವೆಗಳು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಸ್ಥಗಿತಗೊಳಿಸಲು ಬಿಕಾನೇರ್ ವಿಭಾಗೀಯ ಆಯುಕ್ತ ಬಿ.ಎಲ್. ಮೆಹ್ರಾ ಆದೇಶಿಸಿದ್ದಾರೆ. 2G,3G,4G ಡೇಟಾ,SMS/MMS,ವಾಟ್ಸಾಪ್,ಫೇಸ್ಬುಕ್, ಟ್ವಿಟ್ಟರ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳನ್ನೂ ನಿಷೇಧಿಸಲಾಗುವುದು.

ಉತ್ತರ ಭಾರತದಲ್ಲಿ ನಡೆಯುವ ವಿವಿಧ ಪರೀಕ್ಷೆಗಳಲ್ಲಿ ಆಧುನಿಕ ವ್ಯವಸ್ಥೆಗಳನ್ನು ದುರುಪಯೋಗಪಡಿಸಿ ನಕಲು ಮಾಡಿರುವುದು ಈ ಹಿಂದೆ ಹಲವು ಬಾರಿ ಪತ್ತೆಯಾಗಿತ್ತು.

Join Whatsapp