Home ಟಾಪ್ ಸುದ್ದಿಗಳು ಝೀಕಾ ಸೋಂಕಿನ ಭೀತಿ ಹಿನ್ನೆಲೆ: ಪ್ರಯಾಣಿಕರ ಕಟ್ಟುನಿಟ್ಟಿನ ತಪಾಸಣೆ

ಝೀಕಾ ಸೋಂಕಿನ ಭೀತಿ ಹಿನ್ನೆಲೆ: ಪ್ರಯಾಣಿಕರ ಕಟ್ಟುನಿಟ್ಟಿನ ತಪಾಸಣೆ

ಬೆಂಗಳೂರು: ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಾಗೂ ಝೀಕಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರ ತಪಾಸಣೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.


ರಾಜ್ಯ ಗೃಹ ಇಲಾಖೆ ನಿರ್ದೇಶನದಂತೆ ಗಡಿ ಭಾಗಗಳಲ್ಲಿ ಪ್ರಯಾಣಿಸುವವರ ತಪಾಸಣೆಯನ್ನು ಬಿಗಿಗೊಳಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಹೃಷಿಕೇಶ್ ಭಗವಾನ್ ಸೋನಾವನೆ ತಿಳಿಸಿದ್ದಾರೆ. ಜಿಲ್ಲೆಯನ್ನು ಸಂಪರ್ಕಿಸುವ 16 ಕಡೆಗಳಲ್ಲಿ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ಈ ಗಡಿ ಭಾಗಗಳಲ್ಲಿ ಸಂಚರಿಸುವವರು ಕೋವಿಡ್ ಲಸಿಕೆ ಪಡೆದ ದಾಖಲೆ ಅಥವಾ ಆರ್ ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹಾಜರು ಪಡಿಸಬೇಕು. ಇಲ್ಲವೇ ಗಂಟಲು ದ್ರವ ಪರೀಕ್ಷೆ ಕಡ್ಡಾಯವಾಗಿದೆ ಎಂದು ಅವರು ಹೇಳಿದ್ದಾರೆ.


ಎಸ್ಐ ನೇತೃತ್ವದಲ್ಲಿ ಪ್ರತಿ ಠಾಣೆಯಲ್ಲಿ 4 ರಿಂದ 5 ಪೊಲೀಸ್ ಸಿಬ್ಬಂದಿ ಮೂರು ಪಾಳಿಯಲ್ಲಿ, ಆರೋಗ್ಯ ಸಿಬ್ಬಂದಿ ಸಹಕಾರದೊಂದಿಗೆ ತಪಾಸಣೆ ನಡೆಸಲಿದ್ದಾರೆ. ಕೇರಳ-ಕರ್ನಾಟಕ ನಡುವೆ ಬಸ್ ಸಂಚಾರ ಆರಂಭವಾದಗಲೂ ಇದೇ ರೀತಿಯ ಕ್ರಮವನ್ನು ಜಿಲ್ಲಾಡಳಿತದ ಸೂಚನೆ ಮೇರೆಗೆ ಅನುಸರಿಸಲಾಗುವುದು ಎಂದು ಅವರು ಹೇಳಿದರು.

Join Whatsapp
Exit mobile version