ಫೆ. 9ಕ್ಕೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ರಿಯಾಝ್ ಫರಂಗಿಪೇಟೆ ಕೆಸಿ ರೋಡ್’ ಗೆ

Prasthutha|

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು,ರಾಷ್ಟೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ರವರು ಫೆಬ್ರವರಿ 9 ಶುಕ್ರವಾರ ಸಂಜೆ ಮಂಗಳೂರು ವಿಧಾನಸಭಾ ಕ್ಷೇತ್ರದ, ಕೆಸಿ ರೋಡ್ ನಲ್ಲಿ ಪಕ್ಷದ ತಲಪಾಡಿ ಗ್ರಾಮ ಸಮಿತಿಯ ನೂತನ ಕಛೇರಿ ಉದ್ಘಾಟನೆ ಹಾಗೂ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

- Advertisement -


ಈ ಕಾರ್ಯಕ್ರಮದಲ್ಲಿ ದಕ್ಸಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಭಾಗವಹಿಸಲಿದ್ದಾರೆ ಎಂದು ತಲಪಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ಇಮ್ರಾನ್ ಪೂಮನ್ನ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Join Whatsapp