ಟೋಕಿಯೋ ಒಲಂಪಿಕ್, ಪ್ಯಾರಾ ಒಲಂಪಿಕ್‌ನಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ರಾಜಭವನದಲ್ಲಿ ಸನ್ಮಾನ

Prasthutha|

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ರಾಜಭವನದಲ್ಲಿ ಆಯೋಜಿಸಿದ್ದ ಟೋಕಿಯೋ ಒಲಂಪಿಕ್ ಮತ್ತು ಪ್ಯಾರಾಲಿಂಪಿಕ್ ನಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳು ಮತ್ತು ತರಬೇತುದಾರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಲಾ ಒಂದು ಲಕ್ಷ ರೂ. ನೀಡಿ ಸನ್ಮಾನಿಸಿದರು.

- Advertisement -

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ. ಕೆಸಿ ನಾರಾಯಣ ಗೌಡ ಅವರು, ಕರ್ನಾಟಕ ಒಲಂಪಿಕ್ ಸಂಸ್ಥೆ ಅಧ್ಯಕ್ಷರು, ಪರಿಷತ್ ಸದಸ್ಯರಾದ ಗೋವಿಂದರಾಜು ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Join Whatsapp