ಲಾರಿ ಡಿಕ್ಕಿಯಾಗಿ ಹೆಣ್ಣಾನೆ ಸಾವು; ಅರಣ್ಯ ಇಲಾಖೆ ವಿರುದ್ಧ ಆಕ್ರೋಶಗೊಂಡ ಪರಿಸರ ವಾದಿಗಳು

Prasthutha|

ಚಾಮರಾಜನಗರ: ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿ ಹೆಣ್ಣಾನೆ ಸ್ಥಳದಲ್ಲೇ ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲೂಕಿನ‌ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.

- Advertisement -


ಬಂಡೀಪುರ ಅಭಯಾರಣ್ಯ ಪ್ರದೇಶದಲ್ಲಿ ಭಾರಿ ವಾಹನಗಳಿಗೆ ರಾತ್ರಿ ಸಂಚಾರ ನಿಷೇಧಿಸಲಾಗಿದೆ. ಆದರೆ ನಿಯಮ ಉಲ್ಲಂಘಿಸಿ ಸಂರಕ್ಷಿತಾರಣ್ಯದಲ್ಲಿ ವೇಗವಾಗಿ ಬಂದ ಲಾರಿ ರಸ್ತೆ ಮಧ್ಯೆ ನಿಂತಿದ್ದ ಕಾಡಾನೆಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಆನೆ ಸ್ಥಳದಲ್ಲೇ ಸಾವನ್ನಪ್ಪಿದೆ.


ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಬಳಿಕ ಚಾಲಕ ಮತ್ತು ಲಾರಿಯನ್ನು ವಶಕ್ಕೆ ಪಡೆದು ಕ್ರಮಕ್ಕೆ ಮುಂದಾಗಿದ್ದಾರೆ.

- Advertisement -


ಹೆಣ್ಣಾನೆ ಸಾವಿಗೀಡಾಗಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪರಿಸರವಾದಿಗಳು ಅರಣ್ಯದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಅರಣ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ.

Join Whatsapp