ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ: ಚಲನಚಿತ್ರ ನಿರ್ಮಾಪಕನ ಬಂಧನ

Prasthutha|

ಬೆಂಗಳೂರು: ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ನಡೆಸಿರುವ ಸಂಬಂಧ ‘ಶಬಾಷ್ ಬಡ್ಡಿ ಮಗನೇ’ ಚಿತ್ರದ ನಿರ್ಮಾಪಕ ಪ್ರಕಾಶ್ ಅವರನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.

- Advertisement -


ಕೆಎಂಎಫ್’ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ 20 ಲಕ್ಷ ರೂಗಳಿಗೆ ಮಾತುಕತೆ ನಡೆಸಿ ಚಿಕ್ಕಬಳ್ಳಾಪುರ ಮೂಲದ ವ್ಯಕ್ತಿಯಿಂದ 10 ಲಕ್ಷ ರೂ.ಹಣ ಪಡೆದು ವಂಚನೆ ಮಾಡಿದ್ದ ಆರೋಪಿ ಪ್ರಕಾಶ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಡಿಸಿಪಿ ಸಿಕೆ ಬಾಬಾ ತಿಳಿಸಿದ್ದಾರೆ.


ಆರೋಪಿ ಪ್ರಕಾಶ್ ನೇಮಕಾತಿ ಮಾಡಲು ಒತ್ತಾಯಿಸಿದ ವ್ಯಕ್ತಿಗೆ ಸರ್ಕಾರದ ನಕಲಿ ನೇಮಕಾತಿ ಆದೇಶ ಪತ್ರ ನೀಡಿದ್ದಾರೆ. ಕೆಎಂಎಫ್ ನಿರ್ದೇಶಕರ ಸಹಿ, ಸರ್ಕಾರಿ ಲಾಂಛನಗಳ ನಕಲಿ ಮಾಡಿ ಆದೇಶ ಪ್ರತಿ ನೀಡಿದ್ದಾರೆ. ಆದೇಶ ಪ್ರತಿ ಹಿಡಿದು ಕೆಎಂಎಫ್’ಗೆ ಹೋದಾಗ ಅದು ನಕಲಿ ಆದೇಶ ಪ್ರತಿ ಎಂಬುವುದು ತಿಳಿದು ಬಂದಿದೆ.

- Advertisement -


ಈ ಬಗ್ಗೆ ಕೆಎಂಎಫ್ ಅಧಿಕಾರಿಗಳು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ದೂರಿನನ್ವಯ ಆರೋಪಿ ಪ್ರಕಾಶ್’ನನ್ನು ಐಪಿಸಿ 420 ಅಡಿಯಲ್ಲಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.


ನಿರ್ಮಾಪಕ ಬಂಧನವಾಗುತ್ತಿದ್ದಂತೆಯೇ ಶಬಾಷ್ ಬಡ್ಡಿ ಮಗನೇ ಸಿನಿಮಾ ನಿಂತು ಹೋಗಿದೆ. ಕಳೆದ ವರ್ಷ ಅಕ್ಟೋಬರ್’ನ ದಸರಾ ವೇಳೆಗೆ ಮುಹೂರ್ತ ಇಟ್ಟು ಶುರು ಮಾಡಿದ್ದ ಶಬಾಷ್ ಬಡ್ಡಿ ಮಗನೇ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ ನಾಯಕ ನಟನಾಗಿ ಅಭಿನಸುತ್ತಿರುವ ಮೊದಲ ಸಿನಿಮಾ ಆಗಿದೆ.

Join Whatsapp