ಮಂಗಳೂರು: ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಎಬಿವಿಪಿ ಕಾರ್ಯಕರ್ತರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ವಿದ್ಯಾರ್ಥಿಗಳು ಸೇರಿದಂತೆ 6 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಮರ್ಝೂಕ್, ಅಬೂಬಕರ್ ಸಿದ್ದೀಕ್, ಮುಹಮ್ಮದ್ ಅಪಾಝ್, ಪ್ರಜನ್ ಶೆಟ್ಟಿ , ಸ್ವಸ್ತಿಕ್ ಹಾಗೂ ಗುರುಕಿರಣ್ ಮೇಲೆ ಎಫ್ಐಆರ್ ದಾಖಲಾಗಿದೆ.
ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ತರಗತಿಯೊಳಗೆ ಸಾವರ್ಕರ್ ಫೋಟೊ ಅಳವಡಿಸಿ ವಿವಾದ ಸೃಷ್ಟಿಸಲಾಗಿತ್ತು. ಬಳಿಕ ಕಾಲೇಜು ಪ್ರಾಂಶುಪಾಲೆ ಸಾವರ್ಕರ್ ಫೋಟೋವನ್ನು ತೆರವುಗೊಳಿಸಿದ್ದರು. ಪ್ರಾಂಶುಪಾಲೆಗೆ ದೂರು ನೀಡಿದ್ದನ್ನೇ ನೆಪವಾಗಿಸಿದ ಎಬಿವಿಪಿ ಕಾರ್ಯಕರ್ತರು ಶುಕ್ರವಾರ ಮೂವರು ಮುಸ್ಲಿಂ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದರು.
ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ ಕೃತ್ಯವನ್ನು ಖಂಡಿಸಿ ಮತ್ತು ಹಲ್ಲೆಕೋರರನ್ನು ಬಂಧಿಸುವಂತೆ ಆಗ್ರಹಿಸಿ ಸಮಾನ ಮನಸ್ಕ ವಿದ್ಯಾರ್ಥಿ ಸಂಘಟನೆಗಳು ಶುಕ್ರವಾರ ಸಂಜೆ ಕಾಲೇಜಿನ ಮುಂದೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತ್ತು.
ಮಂಗಳೂರು ವಿವಿಯಲ್ಲಿ ಹಲ್ಲೆ ಪ್ರಕರಣ: ಹಲ್ಲೆಗೊಳಗಾದ ವಿದ್ಯಾರ್ಥಿಗಳು ಸೇರಿ 6 ಮಂದಿಯ ವಿರುದ್ಧ FIR
Prasthutha|
![WhatsApp Image 2022-06-11 at 5.13.52 PM](https://prasthutha.com/wp-content/uploads/2022/06/WhatsApp-Image-2022-06-11-at-5.13.52-PM-e1654947850492.jpeg)
![](https://prasthutha.com/wp-content/uploads/2022/10/Screenshot-from-2022-10-25-23-10-04.png)