Home ಟಾಪ್ ಸುದ್ದಿಗಳು ಪಾರ್ಕಿಂಗ್ ವಿಚಾರದಲ್ಲಿ ಗಲಾಟೆ, ಹಲ್ಲೆ: ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರನ ಮೇಲೆ FIR

ಪಾರ್ಕಿಂಗ್ ವಿಚಾರದಲ್ಲಿ ಗಲಾಟೆ, ಹಲ್ಲೆ: ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರನ ಮೇಲೆ FIR

ಬೆಂಗಳೂರು: ವಸಂತನಗರದ ಎಂಬೆಸ್ಸಿ ಅಪಾರ್ಟ್ ಮೆಂಟ್ ಸಮುಚ್ಚಯದಲ್ಲಿ ವಾಹನ ನಿಲುಗಡೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಹಲ್ಲೆ ಮಾಡಿದ ಆರೋಪದ ಸಂಬಂಧ ಹಟ್ಟಿ ಗಣಿ ಅಧ್ಯಕ್ಷ, ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಆಂಜನೇಯ ವಿರುದ್ಧ ಎಫ್ಐಆರ್ ದಾಖಲಾಗಿದೆ.


ಹಲ್ಲೆಗೊಳಗಾದ ಉದ್ಯಮಿ ದೀಪಕ್ ರೈ ಪುತ್ರ ವಿಕ್ರಮ್ ರೈ ನೀಡಿದ ದೂರು ಆಧರಿಸಿ ಹೈಗ್ರೌಂಡ್ಸ್ ಪೊಲೀಸರು ಆಂಜನೇಯ ಮಾನಪ್ಪ ವಜ್ಜಲ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.


ಸುಮಾರು 10 ರಿಂದ 15 ಮಂದಿಯನ್ನು ಕರೆಸಿ ಹಲ್ಲೆ ಮಾಡಿದ್ದಾರೆ ಎಂದು ವಿಕ್ರಮ್ ದೂರಿನಲ್ಲಿ ತಿಳಿಸಿದ್ದಾರೆ. ಇತ್ತ ಮಾನಪ್ಪ ವಜ್ಜಲ್ ಪುತ್ರ ಆಂಜನೇಯ ಸಹ ಪ್ರತಿ ದೂರು ನೀಡಿದ್ದು ಇಬ್ಬರ ದೂರುಗಳ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 124, 324, 504, 506, 149 ಅಡಿ ಎಫ್ಐಆರ್ ಮಾಡಿದ್ದಾರೆ.

Join Whatsapp
Exit mobile version