ಕಡಬ: ಮಾನಭಂಗ ಯತ್ನ ಪ್ರಕರಣದ ಆರೋಪಿಯಿಂದ ಹಣ ವಸೂಲಿಗೆ ಯತ್ನ ಆರೋಪ, ಪತ್ರಕರ್ತನ ವಿರುದ್ಧ FIR

Prasthutha|

ಮಂಗಳೂರು: ಮಾನಭಂಗ ಯತ್ನ ಪ್ರಕರಣದ ಆರೋಪಿಯಿಂದ ಹಣ ವಸೂಲಿ ಮಾಡಲು ಬೆದರಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಸ್ಥಳೀಯ ಪತ್ರಕರ್ತನೊಬ್ಬನ ಮೇಲೆ ಪ್ರಕರಣ ದಾಖಲಾಗಿದೆ. ಪತ್ರಕರ್ತ ಗಣೇಶ ಇಡಾಳ ಎಂಬಾತನ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -


ಸೊಬಗು ಟಿವಿ ಹಾಗೂ ಅದರ ಮಾಲಿಕರ ಹೆಸರಿನಲ್ಲಿ ಹಣ ವಸೂಲಿ ಮಾಡಲು ಯತ್ನಿಸಿದಲ್ಲದೇ , ಅವರನ್ನು ಅವಾಚ್ಯ ಶಬ್ದಗಳಿಂದ ನಿಂಧಿಸಿ ಕೊಲೆ ಬೆದರಿಕೆ ಹಾಕಿರುವ ದೂರಿಗೆ ಸಂಬಂಧಪಟ್ಟಂತೆ ಪುತ್ತೂರು ಜೆ.ಎಮ್.ಎಫ್.ಸಿ ನ್ಯಾಯಾಲಯದ ಆದೇಶದಂತೆ , ಗಣೇಶ ಇಡಾಳ ಮೇಲೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬದ ಮಹಿಳೆಯೊಬ್ಬರು ಕಳಾರದಲ್ಲಿರುವ ಆಯುರ್ವೇದಿಕ್ ಮಸಾಜ್ ಸೆಂಟರ್ ನ ಮಾಲಿಕ ತನಗೆ ಲೈಂಗಿಕ ಕಿರುಕುಳವನ್ನು ನೀಡಿದ್ದಾನೆ ಎಂದು ಆರೋಪಿಸಿ ಕಡಬ ಠಾಣೆಯಲ್ಲಿ ದೂರೊಂದನ್ನು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಕಡಬ ಪೊಲೀಸರು ವೈದ್ಯನ ಮೇಲೆ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದರು.

- Advertisement -


ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮ ವರದಿಗಾರನೆಂದು ಬಿಂಬಿಸಿ ಸೊಬಗು ಟಿವಿ ಹೆಸರಿನಲ್ಲಿ ಗಣೇಶ ಇಡಾಳ ಎಂಬಾತ ವೈದ್ಯನ ಜೊತೆ 2 ಲಕ್ಷ ರೂಪಾಯಿಗಳ ಬೇಡಿಕೆಯನ್ನು ಇಟ್ಟಿದ್ದ. 2 ಲಕ್ಷ ರೂಪಾಯಿಗಳನ್ನು ನೀಡಿದ್ದಲ್ಲಿ ಆರೋಪಿಯಾದ ವೈದ್ಯವನ್ನು ಈ ಪ್ರಕರಣದಿಂದ ಹೊರ ತರುವುದಾಗಿ ವೈದ್ಯನಲ್ಲಿ ಹೇಳಿದ ಎನ್ನಲಾಗಿದೆ.


ಇದೀಗ ಇವನ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನ್ಯಾಯಾಲಯವು ಇವನ ವಿರುದ್ಧ ತನಿಖೆ ನಡೆಸಿ ವರದಿಯನ್ನು ಮಾನ್ಯ ನ್ಯಾಯಾಲಯಕ್ಕೆ ನೀಡುವಂತೆ ಕಡಬ ಪೊಲೀಸರಿಗೆ ಆದೇಶಿಸಿದೆ. ಅದರಂತೆ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.


ಸೊಬಗು ಟಿವಿಯ ವರವಾಗಿ ಪುತ್ತೂರಿನ ಖ್ಯಾತ ವಕೀಲರಾದ ಸಂತೋಷ್ ಕುಮಾರ್ ಉಪ್ಪಿನಂಗಡಿ ಹಾಗೂ ಕುಮಾರಿ ಹೇಮಲತಾ ನ್ಯಾಯಾಲಯದಲ್ಲಿ ವಾದ ಮಂಡಿಸಿದರು.

Join Whatsapp
Exit mobile version