ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ | ಮೌಲಾನ ಮುಫ್ತಿ ನದೀಮ್ ನಖ್ವಿ , ಪತ್ರಕರ್ತೆ ಸಬಾ ನಖ್ವಿ ವಿರುದ್ಧ ಪ್ರಕರಣ ದಾಖಲು

Prasthutha|

ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಪೋಸ್ಟ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ವಕ್ತಾರೆ ಮತ್ತು ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಇದಕ್ಕೆ ಸಂಬಂಧಿಸಿದಂತೆ ಸದ್ಯ ಎರಡು ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಬಿಜೆಪಿ ದೆಹಲಿ ಉಚ್ಚಾಟಿತ ವಕ್ತಾರ ನವೀನ್ ಕುಮಾರ್ ಜಿಂದಾಲ್, ಹಿಂದೂ ಮಹಾ ಸಭಾ ನಾಯಕಿ ಪೂಜಾ ಶಕುನ್ ಪಾಂಡೆ, ರಾಜಸ್ಥಾನ ಮೂಲದ ಧರ್ಮಗುರು ಮೌಲಾನ ಮುಫ್ತಿ ನದೀಮ್ ನಖ್ವಿ, ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಮತ್ತು ಪೀಸ್ ಪಾರ್ಟಿ ವಕ್ತಾರ ಶಾದಾಬ್ ಚೌಹಾಣ್ ಸೇರಿದಂತೆ ಎಂಟು ಮಂದಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ.

- Advertisement -

ಅಲ್ಲದೆ ಬಿಜೆಪಿಯಿಂದ ಅಮಾನತುಗೊಂಡ ವಕ್ತಾರೆ ನೂಪುರ್ ಶರ್ಮಾ ಮತ್ತು ಇತರ ಸಾಮಾಜಿಕ ಮಾಧ್ಯಮ ಬಳಕೆದಾರರ ವಿರುದ್ಧ ಎರಡನೇ ಪ್ರಕರಣ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.



Join Whatsapp