ಹಿಂದೂಗಳು ಮುಸ್ಲಿಂ ಯುವತಿಯರನ್ನು ಮದುವೆಯಾಗಿ ಪ್ರತೀಕಾರ ತೀರಿಸಿಕೊಳ್ಳಿ ಎಂದಿದ್ದ ಶ್ರೀರಾಮ ಸೇನೆ ಮುಖಂಡನ ವಿರುದ್ಧ FIR

Prasthutha|

ರಾಯಚೂರು: ನಮ್ಮ ಹಿಂದೂ ಹುಡುಗರು ಮುಸ್ಲಿಂ ಯುವತಿಯರನ್ನು ಮದುವೆಯಾಗಿ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು  ಹೇಳಿಕೆ ನೀಡಿದ್ದ ಶ್ರೀರಾಮ ಸೇನೆ ಮುಖಂಡ ರಾಜಾಚಂದ್ರ ರಾಮನಗೌಡ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

- Advertisement -

ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ರಾಜಾಚಂದ್ರ ರಾಮನಗೌಡ ಮತ್ತು ಮಂಜುನಾಥ್ ವಿರುದ್ಧ ಐಪಿಸಿ ಸೆಕ್ಷನ್ 153ರ ಗಲಭೆ ಸೃಷ್ಟಿಗೆ ಪ್ರಚೋದನೆ ನೀಡುವುದು, 153ಎ ಅಡಿ ಎರಡು ಕೋಮುಗಳ ನಡುವೆ ವೈರತ್ವ ಸೃಷ್ಟಿಸುವುದು, 295 ಅಡಿಯಲ್ಲಿ ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಳೆದ ಏಪ್ರಿಲ್ 10ರಂದು ರಾಯಚೂರಿನಲ್ಲಿ ಆಯೋಜಿಸಿದ್ದ ಶ್ರೀರಾಮ ನವಮಿ ಕಾರ್ಯಕ್ರಮದಲ್ಲಿ ಅನ್ಯಧರ್ಮದ ಕುರಿತು ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ರಾಜಾಚಂದ್ರ ರಾಮನಗೌಡ ವಿರುದ್ಧ ಆರೋಪಿಸಲಾಗಿದೆ.

Join Whatsapp