ಬಿಜೆಪಿ ಮುಖಂಡ ಕೆ.ಎನ್. ಚಕ್ರಪಾಣಿ ವಿರುದ್ಧ FIR ದಾಖಲು

Prasthutha|

ಬೆಂಗಳೂರು: ಬಿಜೆಪಿ ಮುಖಂಡ ಕೆ.ಎನ್. ಚಕ್ರಪಾಣಿ ವಿರುದ್ಧ ಹಲ್ಲೆ, ನಿಂದನೆ ಪ್ರಕರಣ ಸಂಬಂಧ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

- Advertisement -

ತನ್ನ ಮೇಲೆ ಹಲ್ಲೆ, ಅವಾಚ್ಯವಾಗಿ ನಿಂದನೆ ಮಾಡಿದ್ದಾರೆಂದು ಚಕ್ರಪಾಣಿ ವಿರುದ್ಧ ಶ್ರೀಧರಮೂರ್ತಿ ಎಂಬುವವರು ಕೋಡಿಗೆಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶ್ರೀಧರಮೂರ್ತಿ ಕೋಡಿಗೆಹಳ್ಳಿಯ ವಿರುಪಾಕ್ಷಪುರದಲ್ಲಿ ಚಕ್ರಪಾಣಿ ಮನೆ ಬಳಿ ಅಪಾರ್ಟ್ ಮೆಂಟ್ ರಿಪೇರಿ ಕೆಲಸ ಮಾಡುತ್ತಿದ್ದರು. ಈ ವೇಳೆ 12 ಜನರ ಗುಂಪಿನೊಂದಿಗೆ ಬಂದ ಚಕ್ರಪಾಣಿ ಶ್ರೀಧರಮೂರ್ತಿ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ‘ನಮ್ಮ ಮನೆ ಮುಂದೆ ನೀನು ಇರಬಾರದು. ಇಲ್ಲಿದ್ರೆ ನಿನ್ನನ್ನು ಸುಮ್ಮನೆ ಬಿಡಲ್ಲ’ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಕುಡಿದು ಬಂದಿದ್ದೀಯಾ ನಾಳೆ ಮಾತಾಡೋಣ ಅಂದ್ರೂ ಚಕ್ರಪಾಣಿ, ಶ್ರೀಧರ್ ಮೂರ್ತಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ಹಲ್ಲೆಗೆ ಸಂಬಂಧಿಸಿದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

- Advertisement -

ಘಟನೆ ಸಂಬಂಧ ಸೆಕ್ಷನ್ 143,448,323,504,506 ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಎಫ್ ಐಆರ್ ಆಗುತ್ತಿದ್ದಂತೆ ಪೊಲೀಸರಿಗೂ ಸಿಗದೇ ಚಕ್ರಪಾಣಿ ತಪ್ಪಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Join Whatsapp