ಮಂಗಳೂರು: ಹಿಜಾಬ್ ಧಾರಿಣಿ ವಿದ್ಯಾರ್ಥಿನಿ ಮೇಲೆ ಹಲ್ಲೆ ಪ್ರಕರಣ; ಸಾಯಿ ಸಂದೇಶ್ ಸೇರಿ ಹಲವರ ವಿರುದ್ಧ FIR ದಾಖಲು

Prasthutha|

ಮಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ಕಾರಣಕ್ಕಾಗಿ ಧಾರ್ಮಿಕವಾಗಿ ನಿಂದಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿನಿಯೋರ್ವಳು ನೀಡಿದ್ದ ದೂರಿನನ್ವಯ ಬಂದರು ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

- Advertisement -

ನಗರದ ರಥಬೀದಿಯ ದಯಾನಂದ ಪೈ- ಸತೀಶ್ ಪೈ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಮೂರು ದಿನಗಳ ಹಿಂದೆ ಹಿಜಾಬ್ ಧಾರಿಣಿ ವಿದ್ಯಾರ್ಥಿನಿ ಹಿಬಾ ಶೇಖ್ ಮೇಲೆ ಎಬಿವಿಪಿ ಕಾರ್ಯಕರ್ತ ಸಾಯಿ ಸಂದೇಶ್ ಹಾಗೂ ಆತನ ಸಹಚರರು ಸೇರಿ ಹಲ್ಲೆ ನಡೆಸಿ ಧಾರ್ಮಿಕವಾಗಿ ನಿಂದಿಸಿದ್ದರು. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿ ಎಬಿವಿಪಿ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಭಾರೀ ಒತ್ತಾಯ ಕೇಳಿ ಬಂದಿತ್ತು.

ಘಟನೆ ಸಂಬಂಧ ನಿತೇಶ್ ಶೆಟ್ಟಿ(20), ಸಮಂತ್ ಆಳ್ವ(21), ಸನತ್ ಶೆಟ್ಟಿ(20), ಸಾಯಿ ಸಂದೇಶ್(20) ಹಾಗೂ ಇತರೆ 15 ಮಂದಿ ಎಬಿವಿಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.   

- Advertisement -

ಘಟನೆ ಕುರಿತು ಮಾರ್ಚ್ 4 ರ ರಾತ್ರಿ ಹಲ್ಲೆಗೊಳಗಾದ ಸಂತ್ರಸ್ತೆ ಹಿಬಾ ಶೇಖ್ ಬಂದರು ಠಾಣೆಗೆ ಆಗಮಿಸಿ ದೂರು ದಾಖಲಿಸಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು ಪೊಲೀಸರು ನಾಲ್ವರು ಪ್ರಮುಖ ಆರೋಪಿಗಳು ಸೇರಿದಂತೆ ಇತರೆ 15 ಮಂದಿ ಎಬಿವಿಪಿ ಸದಸ್ಯರನ್ನು ಆರೋಪಿಗಳನ್ನಾಗಿಸಿ ಐಪಿಸಿ ಸೆಕ್ಷನ್ 323, 504ರಡಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

Join Whatsapp