ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: 10 ಮಂದಿಗೆ ಗಾಯ

Prasthutha|

ಭುವನೇಶ್ವರ್: ದಲಿತರು ವಾಸಿಸುತ್ತಿದ್ದ ಹುಲ್ಲುವಾವಲು ಭೂಮಿಯಲ್ಲಿದ್ದ ಗುಡಿಸಲುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ಸುಮಾರು 20ಕ್ಕೂ ಅಧಿಕ ಗುಡಿಸಲುಗಳು ಬೆಂಕಿಗಾಹುತಿಯಾಗಿ 10 ಮಂದಿ ಗಾಯಗೊಂಡಿರುವ ಘಟನೆ ಒರಿಸ್ಸಾದ ಬ್ರಹ್ಮಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಭಾನುವಾರ ಬ್ರಹ್ಮಗಿರಿಯ ಸತಪಾದದ ನಾಥಪುರ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.

ಈ ವೇಳೆ ಎರಡೂ ಗುಂಪಿನವರು ಪರಸ್ಪರ ಬಾಂಬುಗಳನ್ನು ಎಸೆದಿದ್ದು, ಇದರಿಂದ ಕನಿಷ್ಠ 10 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ, 20 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ ಎಂದು ‘ಒರಿಸ್ಸಾ ಪೋಸ್ಟ್‌’ ವರದಿ ಮಾಡಿದೆ. ಘಟನೆ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊಗಳು ವೈರಲ್ ಆಗಿವೆ.

- Advertisement -

ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp