ಹೊಸದಿಲ್ಲಿ: ಪಾದರಕ್ಷೆ ತಯಾರಿಕೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ದೆಹಲಿಯ ನರೆಲಾ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
![](https://prasthutha.com/wp-content/uploads/2022/11/FotoJet-2-1024x729.jpg)
ಮೃತರ ಗುರುತು ಪತ್ತೆಹಚ್ಚಲಾಗುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಕಾರ್ಖಾನೆಯೊಳಗೆ ಸಿಲುಕಿಕೊಂಡವರಲ್ಲಿ ಮೂವರನ್ನು ರಕ್ಷಿಸಲಾಗಿದ್ದು, ಇನ್ನೂ ಹಲವರು ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.