ವಂದೇ ಭಾರತ್ ರೈಲಿನಲ್ಲಿ ಅಗ್ನಿ ಅವಘಡ : ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

Prasthutha|

ಭೋಪಾಲ್: ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಭಾರಿ ಅನಾಹುತವೊಂದು ತಪ್ಪಿದೆ.

- Advertisement -

 ಭೋಪಾಲ್- ದೆಹಲಿ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಇಂದು (ಜುಲೈ 17) ಬೆಳಗ್ಗೆ ಮಧ್ಯಪ್ರದೇಶದ ಬಿನಾ ಜಿಲ್ಲೆಯ ಕುರ್ವೈ ಕೆಥೋರಾ ಬಳಿ ಸಂಚರಿಸುತ್ತಿದ್ದಾಗ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಕೆಳಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ. 20171 ವಂದೇ ಭಾರತ್​​ ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ದಿಢೀರ್ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ರೈಲ್ವೆ ಪೊಲೀಸ್ ಸಿಬ್ಬಂದಿಯೊಬ್ಬರು ಮಣ್ಣಿನಿಂದ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಬೋಗಿಯ ಕೆಳಭಾಗದಲ್ಲಿ ಕೊಂಚ ಸುಟ್ಟು ಹೋಗಿದ್ದು, ಇನ್ನು ಈ ಅಗ್ನಿ ಅವಘಡಕ್ಕೆ ಕಾರಣವೇನು ಎನ್ನುವುದು ತಿಳಿದುಬಂದಿಲ್ಲ. ಈ ಬಗ್ಗೆ ರೈಲ್ವೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Join Whatsapp