ಮಹಾರಾಷ್ಟ್ರದಲ್ಲಿ ಅಗ್ನಿ ಅವಘಡ | ಮೂವರು ಬಲಿ

Prasthutha|

ಮುಂಬೈ: ಮಹಾರಾಷ್ಟ್ರದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತಕ್ಕೆ ಮೂವರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ರಾಜ್ಯದ ಬೋಯಿಸಾರ್‌ನ ರಾಸಾಯನಿಕ ಕಂಪನಿಯೊಂದರಲ್ಲಿ ಈ ಅವಘಡ ಸಂಭವಿಸಿದ್ದು, ಹಲವರು ಪೇಚಾಟದಲ್ಲಿ ಸಿಲುಕಿಕೊಂಡಿದ್ದಾರೆ.

ಈ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.

- Advertisement -

ಹನ್ನೊಂದು ಜನರನ್ನು ಈಗಾಗಲೇ ಸಂರಕ್ಷಿಸಿದ್ದು, ಶಿಂಧೆ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಸಾಯನಿಕ ಬಾಯ್ಲರ್‌ ಸ್ಫೋಟದಿಂದ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಸ್ಪಷ್ಟೀಕರಿಸಿದ್ದಾರೆ.

Join Whatsapp