ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಬೆಂಕಿ

Prasthutha|

ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬಸ್ ಭಾಗಶಃ ಸುಟ್ಟುಹೋಗಿರುವ ಘಟನೆ ಕೆ.ಆರ್. ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.

- Advertisement -

ಕೆ ಆರ್ ಸರ್ಕಲ್ ಬಳಿ ಮಧ್ಯಾಹ್ನ 12:10ರ ವೇಳೆ ಮೆಜೆಸ್ಟಿಕ್ ನಿಂದ ಹೊರಟಿದ್ದ  ಬಿಎಂಟಿಸಿ ಬಸ್ ನ ಚಕ್ರದ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ಗಮನಿಸಿ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ತಕ್ಷಣ ಕೆಳಗಿಳಿಸಿದ್ದು, ಯಾವುದೇ ಪ್ರಯಾಣಿಕರಿಗೂ ಹಾನಿಯಾಗಿಲ್ಲ.

ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಿಎಂಟಿಸಿಯ ಹಿರಿಯ ಅಧಿಕಾರಿಗಳು ತಜ್ಞರು ಧಾವಿಸಿ ಪರಿಶೀಲನೆ ಕೈಗೊಂಡಿದ್ದಾರೆ.

Join Whatsapp