ತೊಕ್ಕೊಟ್ಟು : ಬೀಫ್ ಸ್ಟಾಲ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Prasthutha|

ಮಂಗಳೂರು : ಉಳ್ಳಾಲ ನಗರ ಸಭಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯಲ್ಲಿರುವ ಬೀಫ್ ಸ್ಟಾಲೊಂದು ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಹೋದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ದುಷ್ಕರ್ಮಿಗಳು ಈ ಬೀಫ್ ಸ್ಟಾಲ್ ಗೆ ಬೆಂಕಿ ಹಚ್ಚಿರುವುದಾಗಿ ಶಂಕಿಸಲಾಗಿದೆ.

- Advertisement -

ತೊಕ್ಕೊಟ್ಟು ಮಾರುಕಟ್ಟೆಯಲ್ಲಿ ಕಳೆದ 50 ವರ್ಷಗಳಿಂದ ಮಾಂಸ ವ್ಯಾಪಾರ ಮಾಡುತ್ತಿದ್ದ 4 ತಾತ್ಕಾಲಿಕ ಶೆಡ್ ಗೆ ದುಷ್ಕರ್ಮಿಗಳು ಕಳೆದ ರಾತ್ರಿ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದರಿಂದ ಅಲ್ಲಿರುವ ಸೊತ್ತುಗಳು ಸಂಪೂರ್ಣ ಸುಟ್ಟು ನಾಶವಾಗಿವೆ.

ಫಟನಾ ಸ್ಥಳಕ್ಕೆ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಉಪಾಧ್ಯಕ್ಷ  ಅಯ್ಯೂಬ್ ಮಂಚಿಲ, ಮಾಜಿ ಅಧ್ಯಕ್ಷ ರಾದಬಾಜಿಲ್ ಡಿಸೋಜ, ಯು.ಎ. ಇಸ್ಮಾಯಿಲ್, ಸದಸ್ಯರಾದ ಇಬ್ರಾಹಿಂ ಅಶ್ರಫ್, ಅಬ್ದುಲ್ ಅಝೀಝ್ ಕೋಡಿ, ವರ್ತಕರ ಸಂಘದ ಅಬ್ದುಲ್ ಕರೀಂ, ಮನ್ಸೂರ್ ಉಳ್ಳಾಲ ಹಾಗೂ ಅನ್ಸಾರ್ ಅಳೇಕಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಅವರೆಲ್ಲ ಖಂಡನೆ ವ್ಯಕ್ತಪಡಿಸಿದ್ದಾರೆ.

Join Whatsapp