ಒಡಿಶಾದ ದುರ್ಗ್​-ಪುರಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ, ಭಯಭೀತರಾದ ಪ್ರಯಾಣಿಕರು

Prasthutha|

ಭುವನೇಶ್ವರ: ಒಡಿಶಾದ ನೌಪಾದಾ ಜಿಲ್ಲೆಯ ದುರ್ಗ್ ಪುರಿ ಎಕ್ಸ್‌ಪ್ರೆಸ್‌ನ ಬೋಗಿಯೊಳಗೆ ಗುರುವಾರ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು. ಘಟನೆಯಲ್ಲಿ ಯಾವುದೇ ಗಾಯ ಅಥವಾ ಪ್ರಾಣಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ಖಚಿತಪಡಿಸಿದ್ದಾರೆ. ರೈಲಿನ ಬ್ರೇಕ್ ಪ್ಯಾಡ್‌ಗಳಿಗೆ ಬೆಂಕಿ ಹತ್ತಿಕೊಂಡಿತು. ಯಾವುದೇ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

- Advertisement -

ಗುರುವಾರ ಸಂಜೆ ಖರಿಯಾರ್ ರಸ್ತೆ ನಿಲ್ದಾಣಕ್ಕೆ ತಲುಪುತ್ತಿದ್ದಂತೆ ರೈಲಿನ ಬಿ3 ಕೋಚ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರೈಲ್ವೆ ಅಧಿಕಾರಿಗಳು ಒಂದು ಗಂಟೆಯೊಳಗೆ ಸಮಸ್ಯೆಯನ್ನು ಸರಿಪಡಿಸಿದರು ಮತ್ತು ರೈಲು ರಾತ್ರಿ 11 ಗಂಟೆಗೆ ನಿಲ್ದಾಣದಿಂದ ಹೊರಟಿತು. ಹೊಗೆ ಪತ್ತೆಯಾದಾಗ ಅನೇಕ ಪ್ರಯಾಣಿಕರು ಭಯಭೀತರಾಗಿದ್ದು, ರೈಲಿನಿಂದ ಹೊರಬಂದಿದ್ದಾರೆ.  

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಕೆಲವೇ ದಿನಗಳ ಹಿಂದೆ ಸಂಭವಿಸಿದ ಭೀಕರ ರೈಲು ದುರಂತವು 288 ಜನರನ್ನು ಬಲಿತೆಗೆದುಕೊಂಡಿದೆ. ಈ ಘಟನೆಯಲ್ಲಿ 1,100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Join Whatsapp