ದೀಪಾವಳಿ ಸಂಭ್ರಮದ ನಡುವೆ ಬಟ್ಟೆ ಅಂಗಡಿಗೆ ಬೆಂಕಿ | ಇಬ್ಬರು ಅಗ್ನಿಶಾಮಕ ಸಿಬ್ಬಂದಿಯೇ ಸಜೀವ ದಹನ

Prasthutha|

ಮದುರೈ: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ತಮಿಳುನಾಡಿನ ಮದುರೈನಲ್ಲಿ ಬಟ್ಟೆ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಭಾರೀ ದುರಂತ ಸಂಭವಿಸಿದೆ. ಘಟನೆಯಲ್ಲಿ ಬೆಂಕಿ ನಂದಿಸಲು ಹೋದ ಅಗ್ನಿ ಶಾಮಕ ದಳದ ಇಬ್ಬರು ಸಿಬ್ಬಂದಿಯೇ ಸಜೀವ ದಹನಗೊಂಡಿದ್ದಾರೆ.

- Advertisement -

ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಈ ವೇಳೆ ಹಠಾತ್ ಕಟ್ಟಡ ಕುಸಿದಿದೆ. ಕಟ್ಟಡದ ಕೆಳಗೆ ಸಿಲುಕಿದ ಇಬ್ಬರು ಸಿಬ್ಬಂದಿ ಸಜೀವವಾಗಿ ದಹಿಸಿ, ಮೃತಪಟ್ಟಿದ್ದಾರೆ.

ಸತತ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಂದಿಸಲಾಗಿದೆ.  

Join Whatsapp