ಸಿಎಂ ಮಮತಾಗೆ ಅಗ್ನಿ ಪರೀಕ್ಷೆ: ಇಂದು ಭವಾನಿಪುರ ಕ್ಷೇತ್ರದಲ್ಲಿ ಉಪ ಚುನಾವಣೆ

Prasthutha|

ಕೊಲ್ಕೊತ್ತಾ: ಮಮತಾ ಬ್ಯಾನರ್ಜಿಗೆ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಈಗಾಗಲೇ ಆರಂಭವಾಗಿದ್ದು, ಬಿರುಸಿನಿಂದ ಮತದಾನ ನಡೆಯುತ್ತಿದೆ.  

- Advertisement -

ಈ ಹಿಂದೆ ಎರಡು ಬಾರಿ ಮಮತಾ ಅವರನ್ನು ಈ ಕ್ಷೇತ್ರದ ಜನ ಆಯ್ಕೆ ಮಾಡಿದ್ದರು. ಮಮತಾ ಕಳೆದ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅವರ ಪಕ್ಷ ಟಿಎಂಸಿ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿಯಾದ ಮಮತಾ ಅವರಿಗೆ ಸ್ಥಾನ ಉಳಿಸಿಕೊಳ್ಳಲು ಈ ಉಪಚುನಾವಣೆ ಗೆಲುವು ಅನಿವಾರ್ಯವಾಗಿದೆ.

ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾದ ಮಮತಾ ಬ್ಯಾನರ್ಜಿ ಅವರಿಗೆ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ ಮತ್ತು ಸಿಪಿಎಂನ ಶ್ರೀಜಿಬ್ ಬಿಸ್ವಾಸ್ ತೀವ್ರ ಸ್ಪರ್ಧೆಯೊಡ್ಡಿದ್ದಾರೆ.

- Advertisement -

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆಯವರೆಗೂ ನಡೆಯಲಿದೆ. ಸಿಎಂ ಕುರ್ಚಿಯನ್ನು ಉಳಿಸಿಕೊಳ್ಳಲು ಮಮತಾ ಹೋರಾಡುತ್ತಿದ್ದಾರೆ,

ದಕ್ಷಿಣ ಕೊಲ್ಕತ್ತಾದ ಭವಾನಿಪುರ್ ಮತ್ತು ಮುರ್ಷಿದಾಬಾದ್ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ಕ್ಷೇತ್ರಗಳಲ್ಲಿಯೂ ಉಪಚುನಾವಣೆಗೆ ಮತದಾನ ನಡೆಯುತ್ತಿದೆ. ಅಕ್ಟೋಬರ್ 3 ರಂದು ಮತಗ ಎಣಿಕೆ ನಡೆಯಲಿದೆ.

Join Whatsapp