Home ಟಾಪ್ ಸುದ್ದಿಗಳು ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಚಿಕ್ಕಮಗಳೂರು: ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆಯ ಹ್ಯಾಂಡ್​ಪೋಸ್ಟ್​ ಬಳಿ ನಡೆದಿದೆ.

ಹಾಸನ ಮೂಲದ ಕಿಶೋರ್(19), ತನ್ಮಯ್(18) ಮೃತರು. ಹಾಸನದಿಂದ ಕೂಲಿ ಕೆಲಸಕ್ಕೆ ಮೂಡಿಗೆರೆಗೆ ಬಂದಿದ್ದರು. ಇಬ್ಬರ​ ಶವಗಳನ್ನು ಕೆರೆಯಿಂದ ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version