ಮಂಗಳೂರು: ನೇತ್ರಾವತಿ ನದಿಯಲ್ಲಿ ಮುಳುಗಿದ ಬೋಟ್; ಮೀನುಗಾರನ ರಕ್ಷಣೆ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಗ್ರಾಮದಲ್ಲಿ ನೇತ್ರಾವತಿ ನದಿಯಲ್ಲಿ ದೋಣಿಯೊಂದು ಮುಳುಗಿದ್ದು, ಮೀನುಗಾರನನ್ನು ಸಮೀಪದ ಜನರು ರಕ್ಷಿಸಿದ್ದಾರೆ.

- Advertisement -

ಬುಧವಾರ ಮಧ್ಯಾಹ್ನ ಹರೇಕಳ-ಅಡ್ಯಾರ್ ಸೇತುವೆ ಬಳಿ ಮೀನುಗಾರಿಕಾ ದೋಣಿ ಮುಳುಗಿದೆ. ಭಾರೀ ಮಳೆಯ ನಂತರ ನೀರಿನ ಮಟ್ಟದಲ್ಲಿ ಹಠಾತ್ ಹೆಚ್ಚಳವಾಗಿದ್ದು, ನಂತರ ದೋಣಿ ಮುಳುಗಿದೆ ಎಂದು ವರದಿಯಾಗಿದೆ. ಅಕ್ಕಪಕ್ಕದಲ್ಲಿದ್ದವರು ಹಗ್ಗ ಬಳಸಿ ಮೀನುಗಾರನನ್ನು ಮೇಲಕ್ಕೆ ಎಳೆದು ರಕ್ಷಿಸಿದ್ದಾರೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದರೂ ಮೀನುಗಾರರು ನದಿಗೆ ಇಳಿದಿದ್ದರು. ಮೀನುಗಾರಿಕಾ ದೋಣಿ ನೀರಿನಲ್ಲಿ ಕೊಚ್ಚಿ ಹೋಗಿದೆ.

Join Whatsapp