ಒಂದೇ ಕುಟುಂಬದ ಐವರ ಸಾವು ; ಕಂಬನಿ ಮಿಡಿದ ಸಚಿವ ಕಾರಜೋಳ

Prasthutha|

ಬೆಳಗಾವಿ : ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಮಾಜಿ ಯೋಧನೊಬ್ಬ ತನ್ನ ಕುಟುಂಬದ ಸದಸ್ಯರಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

- Advertisement -


ಬ್ಲ್ಯಾಕ್ ಫಂಗಸ್ ಸೋಂಕಿನಿಂದ ತನ್ನ ಪತ್ನಿಯನ್ನು ಕಳೆದುಕೊಂಡಿದ್ದ ಇವರು ನಾಲ್ಕು ಮಕ್ಕಳಿಗೆ ವಿಷ ಪ್ರಾಶನ ಮಾಡಿ ತಾನೂ ದಾರುಣವಾಗಿ ಸತ್ತಿರುವುದು ಮನಕಲಕುತ್ತದೆ ಎಂದು ಶೋಕ ವ್ಯಕ್ತಪಡಿಸಿರುವ ಸಚಿವ ಕಾರಜೋಳ, ಎಂತಹ ಪರಿಸ್ಥಿತಿಯಲ್ಲೂ ಡಿಪ್ರೆಶನ್ ಗೆ ಒಳಗಾಗಿ ಜೀವ ಕಳೆದುಕೊಳ್ಳದಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Join Whatsapp