ರೈಲು ಹರಿದು ಐವರು ಪ್ರಯಾಣಿಕರು ಸಾವು !

Prasthutha|

ಹೈದರಾಬಾದ್: ರೈಲು ಹರಿದು ಐವರು ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ಸೋಮವಾರ ರಾತ್ರಿ ನಡೆದಿದೆ.

- Advertisement -

ಪ್ರಯಾಣಿಕರು ತಾವು ಪ್ರಯಾಣಿಸುತ್ತಿದ್ದ ಗುವಾಹಟಿ ಎಕ್ಸ್‌ಪ್ರೆಸ್ ರೈಲಿನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿ ತುರ್ತು ಸರಪಳಿಯನ್ನು ಎಳೆದರು. ಅವರು ರೈಲಿನಿಂದ ಇಳಿದು ಹಳಿಗಳ ಮೇಲೆ ನಿಂತಿದ್ದರು. ಆಗ ಎದುರಿನಿಂದ ಬಂದ ಇನ್ನೊಂದು ರೈಲು ‘ಕೋನಾರ್ಕ್ ಎಕ್ಸ್‌ ಪ್ರೆಸ್’ ಇವರು ನಿಂತಿದ್ದ ಹಳಿಯ ಮೇಲೆ ಬಂದಿತ್ತು. ಇದನ್ನು ತಿಳಿಯದ ಪ್ರಯಾಣಿಕರು ರೈಲಿನಡಿ ಸಿಲುಕಿಕೊಂಡಿದ್ದಾರೆ. ಪರಿಣಾಮ ಐವರು ಸಾವನ್ನಪ್ಪಿದ್ದಾರೆ.

ಘಟನೆ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

Join Whatsapp