ಈಜಲು ತೆರಳಿದ್ದ ಐವರು ನೀರುಪಾಲು

Prasthutha|

ಮಂಡ್ಯ: ಈಜಲು ತೆರಳಿದ್ದ ಐವರು ನೀರುಪಾಲಾದ ಘಟನೆ ತಾಲೂಕಿನ ದೊಡ್ಡ ಕೊತ್ತಗೆರೆ ಗ್ರಾಮದ ಬಳಿ ವಿಸಿ ನಾಲೆಯಲ್ಲಿ ನಡೆದಿದೆ.

- Advertisement -


ಬೆಂಗಳೂರಿನ ನೀಲಸಂದ್ರ ಮೂಲದ ನಿವಾಸಿಗಳಾದ ಮೆಹತಾ (10), ಅನಿಷಾ ಬೇಗಂ (34), ತಸ್ಮಿಯಾ (22), ಅಶ್ರಕ್ (28), ಅತೀಕ್ (22) ಮೃತರು ಎಂದು ಗುರುತಿಸಲಾಗಿದೆ.


ಇವರು ರಂಝಾನ್ ಬಳಿಕ ರಜೆಗೆಂದು ಹಲ್ಲಗೆರೆಯ ಅಜ್ಜಿ ಮನೆಗೆ ಬಂದಿದ್ದರು. ಈ ವೇಳೆ ಈಜಲು ಹೋಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -


ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಮೃತದೇಹಗಳನ್ನು ವಿಸಿ ನಾಲೆಯಿಂದ ಹೊರ ತೆಗೆಯಲಾಗಿದೆ. ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Join Whatsapp