ಪಂಚರಾಜ್ಯ ಚುನಾವಣೆ: ಸಮಾಜವಾದಿ ಪಕ್ಷದವರು ಪಾಕಿಸ್ಥಾನದ ಜಿನ್ನಾ ಆರಾಧಕರು ಎಂದ ಆದಿತ್ಯನಾಥ್

Prasthutha|

ಲಕ್ನೋ: ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಆಡಳಿತ ಪಕ್ಷ ಬಿಜೆಪಿ ಹಾಗೂ ಪ್ರತಿಪಕ್ಷಗಳು ಪರಸ್ಪರ ಟೀಕಾಪ್ರಹಾರ ನಡೆಸುತ್ತಿವೆ. ಸಮಾಜದವಾದಿ ಪಕ್ಷದವರು ಪಾಕಿಸ್ಥಾನದ ಜಿನ್ನಾನ ಆರಾಧಕರು ಎಂದು ಟ್ವೀಟ್‌ ಮಾಡಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಾಗ್ದಾಳಿ ನಡೆಸಿದ್ದಾರೆ.

- Advertisement -

ಸಮಾಜವಾದಿ ಪಕ್ಷದವರು ಜಿನ್ನಾ ಆರಾಧಕರು, ಆದರೆ ನಾವು ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಆರಾಧಕರು. ಪಾಕಿಸ್ತಾನ ಅವರಿಗೆ ಪ್ರಿಯವಾಗಿದೆ. ನಾವು ಭಾರತ ಮಾತೆಗಾಗಿ ನಮ್ಮ ಜೀವನವನ್ನು ತ್ಯಾಗ ಮಾಡುತ್ತೇವೆ ಎಂದು ಪಾಕಿಸ್ತಾನ ನಿರ್ಮಾತೃ ಮೊಹಮ್ಮದ್‌ ಆಲಿ ಜಿನ್ನಾರನ್ನು ಉಲ್ಲೇಖಿಸಿ ಆದಿತ್ಯನಾಥ್‌ ಟ್ವೀಟ್‌ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಎರಡನೇ ಬಾರಿ ಅಧಿಕಾರಕ್ಕೆ ಬರಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪೂರ್ವದಲ್ಲಿ ಸಿಎಂ ಆದಿತ್ಯನಾಥ್‌ ಅವರು ಧ್ರುವೀಕರಣದಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೆಲ ದಿನಗಳ 80 ವರ್ಸಸ್‌ 20 ಅಂದರೆ ಹಿಂದೂ ಮತ್ತು ಮುಸ್ಲಿಂ ಮತದಾರರು ಎಂದು ಹೇಳಿಕೆ ನೀಡಿದ್ದರು. ಶೇ.80 ಮತದಾರರು ಬಿಜೆಪಿ ಪರವಾಗಿದ್ದಾರೆ ಎಂದಿದ್ದರು.

Join Whatsapp