ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಮೃತ್ಯು

Prasthutha|

ರಾಮನಗರ: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ನಡೆದಿದೆ.

- Advertisement -

ಮೃತರನ್ನು ಹರ್ಷಿತಾ (20), ಅಭಿಷೇಕ್ (20), ತೇಜಸ್ (21), ವರ್ಷ (20) ಹಾಗೂ ನೇಹಾ (19) ಎಂದು ಗುರುತಿಸಲಾಗಿದೆ.


ಇನ್ನುಳಿದ 7ಮಂದಿ ವಿದ್ಯಾರ್ಥಿಗಳು ಪಾರಾಗಿದ್ದಾರೆ. ಮೃತರು ಬೆಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಪ್ರವಾಸಕ್ಕೆ ಬಂದಿದ್ದ ಇವರು, ಮಧ್ಯಾಹ್ನ ನೀರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ ನದಿಯ ಸುಳಿಯಲ್ಲಿ ಸಿಲುಕಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.



Join Whatsapp