ಅಂಗಡಿಗೆ ಗುದ್ದಿದ ಬಸ್: ಐವರು ವಿದ್ಯಾರ್ಥಿಗಳು ಗಂಭೀರ

Prasthutha|

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿದ ಪರಿಣಾಮ ಸ್ಥಳದಲ್ಲಿ ಬಸ್ ಗೆ ಕಾಯುತ್ತಿದ್ದ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ದುಗ್ಲಾಪುರ ಗ್ರಾಮದಲ್ಲಿ ನಡೆದಿದೆ.

- Advertisement -

ವೇಗದ ಚಾಲನೆಯೇ ದುರ್ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.


ಈ ನಡುವೆ ಬಸ್ಸಿನಡಿ ಸಿಲುಕಿ ಕೆಲವು ಮಕ್ಕಳು ಗಾಯಗೊಂಡಿದ್ದು, ಅವರ ಪೈಕಿ ತುಳಸಿ (15), ನಿವೇದಿತ (14) ಎಂಬವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅವರನ್ನು ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Join Whatsapp