ಸ್ವಾತಂತ್ರ್ಯೋತ್ಸವದ ಅಂಗವಾಗಿ ಕ್ಯಾಂಪಸ್ ಫ್ರಂಟ್ ನಿಂದ ಧ್ವಜಾರೋಹಣ

Prasthutha|

►ದೇಶದ ಸ್ವಾತಂತ್ರ್ಯವನ್ನು ಕಾಪಾಡುವಲ್ಲಿಯೂ ಯುವಜನತೆಗೆ ಮಹತ್ತರ ಜವಾಬ್ದಾರಿಯಿದೆ: ಸವಾದ್ ಕಲ್ಲರ್ಪೆ

- Advertisement -

ಮಂಗಳೂರು: ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಸಮಿತಿ ವತಿಯಿಂದ ಮಂಗಳೂರಿನ ಕಚೇರಿ ಬಳಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ರಾಜ್ಯ ಸಮಿತಿ ಸದಸ್ಯ ಫಹದ್ ಅನ್ವರ್ ಧ್ವಜಾರೋಹಣಗೈದರು.

- Advertisement -

ಸ್ವಾತಂತ್ರ್ಯ ಸಂದೇಶ ನೀಡಿದ ಕ್ಯಾಂಪಸ್ ಫ್ರಂಟ್ ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ, ದೇಶವು ಬ್ರಿಟಿಷರ ಕಪಿಮುಷ್ಟಿಯಿಂದ ಸ್ವಾತಂತ್ರ್ಯಗೊಂಡು ಇಂದು ಅಮೃತಮಹೋತ್ಸವವನ್ನು ನಾವು ಆಚರಿಸುತ್ತಿದ್ದೇವೆ, ಈ ಸಂದರ್ಭದಲ್ಲಿ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಹೋರಾಟಗಾರರನ್ನು ನೆನೆಯುತ್ತಾ ಅವರ ಹೋರಾಟದ ಚರಿತ್ರೆಯನ್ನು ಪುನರಾವರ್ತಿಸಿ ಪ್ರಸಕ್ತ ದೇಶದ ಸರ್ವಾಧಿಕಾರದ ವಿರುದ್ಧ ಹೋರಾಟಕ್ಕೆ ಶಕ್ತಿ ತುಂಬಬಹುದಾಗಿದೆ ಎಂದರು.

ಸ್ವಾತಂತ್ರ್ಯ ಚಳುವಳಿಗಳಲ್ಲಿ ಯುವಜನತೆಯ ಪಾತ್ರ ಮಹತ್ವವಾಗಿದ್ದು ಅದರಂತೆ ಈ ದೇಶದ ಸ್ವಾತಂತ್ರ್ಯವನ್ನು ಕಾಪಾಡುವಲ್ಲಿಯೂ ಯುವಜನತೆಯಲ್ಲಿ ಮಹತ್ತರ ಜವಾಬ್ದಾರಿಯಿದೆ. ಅದರಂತೆ ಮುಂದೆ ಸಾಗೋಣ ಎಂದರು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯರಾದ ಸಿರಾಜ್ ಮಂಗಳೂರು, ಜಿಲ್ಲಾಧ್ಯಕ್ಷ ತಾಜುದ್ದೀನ್, ಮಂಗಳೂರು ಗ್ರಾಮಾಂತರ ಅಧ್ಯಕ್ಷ ಅಶ್ರಫ್ ಪೊರ್ಕೊಡಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗ್ರಾಮಾಂತರ ಕಾರ್ಯದರ್ಶಿ ಸರ್ಫರಾಝ್ ಅಂಗರಗುಂಡಿ ಕಾರ್ಯಕ್ರಮ ನಿರೂಪಿಸಿದರು.

Join Whatsapp