ಹಿಂದೂಗಳಿಗೆ ಮಾತ್ರ: ವಿವಾದ ಸೃಷ್ಟಿಸಿದ ತಮಿಳುನಾಡಿನ ಉದ್ಯೋಗ ಜಾಹೀರಾತು

Prasthutha|

ತಮಿಳುನಾಡು: ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಉದ್ಯೋಗಕ್ಕಾಗಿ ನೀಡಿರುವ ಜಾಹೀರಾತಿನಲ್ಲಿ ಹಿಂದೂಗಳಿಗೆ ಮಾತ್ರ ಎಂದಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

- Advertisement -


ಕೊಲತ್ತೂರಿನಲ್ಲಿರುವ ಅರುಲ್ಮಿಗು ಕಪಾಲೀಶ್ವರರ್ ಕಲಾ ಮತ್ತು ವಿಜ್ಞಾನ ಕಾಲೇಜು ಆರಂಭವಾಗುತ್ತಿದ್ದು, ಅಕ್ಟೋಬರ್ 13 ರಂದು ಪ್ರಕಟವಾಗಿರುವ ಜಾಹೀರಾತಿನಲ್ಲಿ, ಬಿಕಾಂ, ಬಿಬಿಎ, ಬಿಎಸ್ಸಿ ಕಂಪ್ಯೂಟರ್ ಸೈನ್ಸ್, ಬಿಸಿಎ, ತಮಿಳು, ಇಂಗ್ಲಿಷ್, ಗಣಿತ ಕೋರ್ಸ್‌ಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಮತ್ತು ದೈಹಿಕ ನಿರ್ದೇಶಕ ಮತ್ತು ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು.


ಆದರೆ, ಬೋಧಕರು ಮತ್ತು ಬೋಧಕೇತರ ಹುದ್ದೆಗಳಿಗೆ ಹಿಂದೂಗಳು ಮಾತ್ರ ಅರ್ಜಿ ಸಲ್ಲಿಸಬಹುದು ಎಂದು ಜಾಹೀರಾತಿನಲ್ಲಿ ಹೇಳಲಾಗಿದೆ ಇದಕ್ಕೆ ಸರ್ಕಾರವು ನಡೆಸುವ ಸಂಸ್ಥೆಗಳು ಸಂವಿಧಾನದ ಪ್ರಕಾರ ಕಾರ್ಯ ನಿರ್ವಹಿಸಬೇಕು ಎಂದು ಬೋಧಕರ ಸಂಘಗಳು ಆಗ್ರಹಿಸಿವೆ.

Join Whatsapp