Home ಟಾಪ್ ಸುದ್ದಿಗಳು ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಸರ್ಕಾರ ರಚನೆ: ಲಾಲು ಪ್ರಸಾದ್

ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಸರ್ಕಾರ ರಚನೆ: ಲಾಲು ಪ್ರಸಾದ್

ಪಟ್ನಾ: ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಸರ್ಕಾರ ರಚಿಸಲಿದೆ ಎಂದು ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಜನರ ಸೇವೆ ಸಲ್ಲಿಸಲು ತನ್ನನ್ನು ದೇವರು ಕಳುಹಿಸಿದ್ದಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಲಾಲು ಲೇವಡಿ ಮಾಡಿದ್ದಾರೆ.


ಜೂನ್ 4ರಂದು ಎಲ್ಲ ಸ್ಪಷ್ಟವಾಗಲಿದ್ದು, ‘ಇಂಡಿಯಾ’ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಅವರು ಹೇಳಿದ್ದಾರೆ.


‘ದೇವರ ಅವತಾರ ಎಂದು ಮೋದಿ ತಮ್ಮನ್ನು ತಾವೇ ಕರೆಯುತ್ತಾರೆ. ದೇವರ ಸಂದೇಶವಾಹಕ ಎಂದು ಹೇಳುತ್ತಾರೆ. ಲೋಕಸಭೆ ಚುನಾವಣೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ. ಮೋದಿಗೆ ತಕ್ಕ ಉತ್ತರ ಸಿಗಲಿದೆ’ ಎಂದು ಅವರು ಹೇಳಿದ್ದಾರೆ.

Join Whatsapp
Exit mobile version