ಆದಿತ್ಯನಾಥ್ ಮುಂದಿನ ಚುನಾವಣೆಯಲ್ಲಿ ಸೋತು ಸಾಧುವಾಗಿ ಮುಂದುವರಿಯಲಿದ್ದಾರೆ: ಬಿಜೆಪಿ ಮುಖಂಡನ ಭವಿಷ್ಯ

Prasthutha|

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್, ಮುಂದಿನ ಚುನಾವಣೆಯಲ್ಲಿ ಸೋತು ಸಾಧುವಾಗಿ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ, ಮಾಜಿ ಶಾಸಕ ರಾಮ್ ಇಕ್ಬಾಲ್ ಸಿಂಗ್ ಬುಧವಾರ ಭವಿಷ್ಯ ನುಡಿದಿದ್ದಾರೆ.

- Advertisement -

ಗೋರಖ್ ಪುರ ದೇವಾಲಯದ ಪ್ರಧಾನ ಅರ್ಚಕರೂ ಆಗಿರುವ ಮುಖ್ಯಮಂತ್ರಿ ಆದಿತ್ಯನಾಥ್ ಮುಂದೆ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯುವ ಭರವಸೆಯಿಲ್ಲ ಎಂದು ಇಕ್ಬಾಲ್ ಸಿಂಗ್ ವ್ಯಂಗ್ಯವಾಡಿದರು.

ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ತಕ್ಷಣ ಕೋಪಗೊಂಡು ಸನ್ಯಾಸಿಯಾಗುತ್ತಾರೆ ಎಂದು ಸಿಂಗ್ ನಾಗ್ರಾದಲ್ಲಿ ಮಾರ್ಮಿಕವಾಗಿ ನುಡಿದರು.

- Advertisement -

ರೈತರ ಸಂಕಷ್ಟದ ಬಗ್ಗೆ ಕಾಳಜಿ ವಹಿಸದ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಂಗ್, ಹಣದುಬ್ಬರದಿಂದಾಗಿ ದೇಶದಲ್ಲೇ ಕೃಷಿ ವೆಚ್ಚ ಸಾಕಷ್ಟು ವೃದ್ಧಿಸಿದೆ ಎಂದು ತಿಳಿಸಿದರು.

ಮಾತ್ರವಲ್ಲ ಕೋವಿಡ್ ನಿರ್ವಹಣೆಯಲ್ಲಿ ಉತ್ತರ ಪ್ರದೇಶದ ಆದಿತ್ಯನಾಥ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Join Whatsapp