‘ಕೈ’ಗೆ ಕೈಕೊಟ್ಟು ಕಮಲದತ್ತ ವಾಲಿದ ಮಾಜಿ ಕಾಂಗ್ರೆಸ್ ಸಂಸದ !

Prasthutha|

- Advertisement -

ಬೆಂಗಳೂರಿನಲ್ಲಿ  ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರು ಇಂದು ಕಾಂಗ್ರೆಸಿಗೆ ಗುಡ್ ಬೈ ಹೇಳಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ವಿರೂಪಾಕ್ಷ ಅವರು ರಾಜ್ಯ ಘಟಕದ ಅಧ್ಯಕ್ಷ ನಳೀನ್‌ ಕುಮಾರ ಕಟೀಲ್‌, ಕೆಎಸ್ ಈಶ್ವರಪ್ಪ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಎಸ್‌ಟಿ ಹೋರಾಟದ ಸಮಾವೇಶಗಳಲ್ಲಿ ಬಹಿರಂಗವಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿರೂಪಾಕ್ಷ  ನಿಂದಿಸಿದ್ದರು ಮತ್ತು ಕಾಂಗ್ರೆಸ್‌ ಬಿಡುವ ಮುನ್ಸೂಚನೆಯನ್ನೂ ನೀಡಿದ್ದರು. ಈಗ ಬಿಜೆಪಿ ಸೇರುವ ಮೂಲಕ ಸಾರ್ವಜನಿಕರ ಅನುಮಾನಗಳಿಗೆ ತಿಲಾಂಜಲಿ ಹಾಡಿದ್ದಾರೆ.

Join Whatsapp