ಬಿಜೆಪಿ ತ್ಯಜಿಸಿದ ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಪುತ್ರ!

Prasthutha|

ಹೊಸದಿಲ್ಲಿ: ಗೋವಾ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ದಿವಂಗತ ಮನೋಹರ್ ಪರಿಕ್ಕರ್ ಅವರ ಮಗ ಉತ್ಪಲ್ ಪರಿಕ್ಕರ್ ಪಕ್ಷ ತ್ಯಜಿಸಿದ್ದಾರೆ.

- Advertisement -

ಉತ್ಪಲ್ ಪರಿಕ್ಕರ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿ ಉತ್ಪಲ್ ಅವರಿಗೆ ತಂದೆ ಪ್ರತಿನಿಧಿಸುತ್ತಿದ್ದ ಪಣಜಿ ಕ್ಷೇತ್ರದಲ್ಲಿ ಟಿಕೆಟ್ ನಿರಾಕರಿಸಿತ್ತು. ಬದಲಾಗಿ ಆ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಮಾಜಿ ನಾಯಕ ಅಟಾನಸಿಯೊ ಬಾಬುಶ್ ಮಾನ್ಸರೇಟ್ ಅವರು ಟಿಕೆಟ್ ಪಡೆದಿದ್ದರು.


ಉತ್ಪಲ್ ಅವರಿಗೆ ಬಿಜೆಪಿ ಬೇರೆ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ಆಫರ್ ನೀಡಿತ್ತು. ಆದರೆ ಪಣಜಿಯಲ್ಲಿಯೇ ಕಣಕ್ಕಿಳಿಯುವುದಾಗಿ ಪಟ್ಟು ಹಿಡಿದಿದ್ದ ಅವರು ಪಕ್ಷ ತ್ಯಜಿಸಿದ್ದಾರೆ.

- Advertisement -

ಫೆಬ್ರವರಿ 14ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದೆ.



Join Whatsapp