Home ಟಾಪ್ ಸುದ್ದಿಗಳು ಬಿಜೆಪಿ ತ್ಯಜಿಸಿದ ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಪುತ್ರ!

ಬಿಜೆಪಿ ತ್ಯಜಿಸಿದ ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಪುತ್ರ!

ಹೊಸದಿಲ್ಲಿ: ಗೋವಾ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ದಿವಂಗತ ಮನೋಹರ್ ಪರಿಕ್ಕರ್ ಅವರ ಮಗ ಉತ್ಪಲ್ ಪರಿಕ್ಕರ್ ಪಕ್ಷ ತ್ಯಜಿಸಿದ್ದಾರೆ.

ಉತ್ಪಲ್ ಪರಿಕ್ಕರ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿ ಉತ್ಪಲ್ ಅವರಿಗೆ ತಂದೆ ಪ್ರತಿನಿಧಿಸುತ್ತಿದ್ದ ಪಣಜಿ ಕ್ಷೇತ್ರದಲ್ಲಿ ಟಿಕೆಟ್ ನಿರಾಕರಿಸಿತ್ತು. ಬದಲಾಗಿ ಆ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಮಾಜಿ ನಾಯಕ ಅಟಾನಸಿಯೊ ಬಾಬುಶ್ ಮಾನ್ಸರೇಟ್ ಅವರು ಟಿಕೆಟ್ ಪಡೆದಿದ್ದರು.


ಉತ್ಪಲ್ ಅವರಿಗೆ ಬಿಜೆಪಿ ಬೇರೆ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ಆಫರ್ ನೀಡಿತ್ತು. ಆದರೆ ಪಣಜಿಯಲ್ಲಿಯೇ ಕಣಕ್ಕಿಳಿಯುವುದಾಗಿ ಪಟ್ಟು ಹಿಡಿದಿದ್ದ ಅವರು ಪಕ್ಷ ತ್ಯಜಿಸಿದ್ದಾರೆ.

ಫೆಬ್ರವರಿ 14ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದೆ.

Join Whatsapp
Exit mobile version