ಚಾಕು ಇರಿತಕ್ಕೊಳಗಾಗಿದ್ದ ಜೆಡಿಎಸ್ ಮಾಜಿ ಕಾರ್ಪೊರೇಟರ್ ಪತಿ ಮೃತ್ಯು!

Prasthutha|

ಬೆಂಗಳೂರು: ಚಾಮರಾಜಪೇಟೆಯ ಟಿಪ್ಪುನಗರದ ವಾರ್ಡ್ ನ ಮಾಜಿ ಕಾರ್ಪೋರೇಟರ್ ನಜೀಮಾ ಅವರ ಪತಿ ಆಯೂಬ್ ಖಾನ್ ನಿನ್ನೆ ಸಂಬಂಧಿಕರಿಂದಲೇ ಚಾಕು ಇರಿತಕ್ಕೊಳಗಾಗಿದ್ದು ಇಂದು ಸಾವನ್ನಪ್ಪಿದ್ದಾರೆ.

- Advertisement -

ನಿನ್ನೆ ಸಂಜೆ 7.45 ರ ವೇಳೆ ಅಯ್ಯೂಬ್ ಅಣ್ಣನ ಪುತ್ರನೇ ಚಾಕುವಿನಿಂದ ಇರಿದ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಬಿಬಿಎಂಪಿ ಮಾಜಿ ಸದಸ್ಯ ಆಯುಬ್ ಖಾನ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಆರೋಪಿ ಹಾಗೂ ಆಯ್ಯೂ ಖಾನ್ ನಡುವೆ ಹಲವು ತಿಂಗಳಿಂದ ವೈಮನಸ್ಸು ಇತ್ತು ಎಂದು ಹೇಳಲಾಗುತ್ತಿದೆ. ನಿಖರವಾಗಿ ಯಾವ ವಿಚಾರಕ್ಕಾಗಿ ಜಗಳ ನಡೆದಿದೆ ಎಂಬುದು ತಿಳಿದು ಬಂದಿಲ್ಲ ಎಂದು ಡಿಸಿಪಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ. ಈ ಸಂಬಂಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಕುವಿನಿಂದ ಇರಿದು ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Join Whatsapp