ಕರ್ನಾಟಕದ ಮಾಜಿ ಸಚಿವ ಎಂ.ರಘುಪತಿ ನಿಧನ

Prasthutha|

ಬೆಂಗಳೂರು: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಎಂ.ರಘುಪತಿ ಅವರು ಶನಿವಾರ ಮುಂಜಾನೆ ತಮ್ಮ ಮಲ್ಲೇಶ್ವರಂ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

- Advertisement -

ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಎಂ.ರಘುಪತಿ ಅವರು ಮಲ್ಲೇಶ್ವರಂ ಮತ್ತು ಶಿವಾಜಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದು ಶಾಸಕರಾಗಿದ್ದರು. ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಅವರ ಸಂಪುಟದಲ್ಲಿ ಎಂ.ರಘುಪತಿ ಅವರು ಶಿಕ್ಷಣ ಸಚಿವರಾಗಿದ್ದರು.

ಎಂ.ರಘುಪತಿ ಅವರ ಪಾರ್ಥೀವ ಶರೀರವನ್ನು ಅವರ ಮಲ್ಲೇಶ್ವರಂ ನಿವಾಸದಲ್ಲಿ ಇರಿಸಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಬೆಳಗ್ಗೆ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ಎಂ. ರಘುಪತಿ ಅಗಲಿಕೆಗೆ ಸಿದ್ದರಾಮಯ್ಯ ಸೇರಿ ಹಲವು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

Join Whatsapp