ಮಾಜಿ ಸಚಿವ ಹೆಚ್.ಡಿ.ರೇವಣ್ಣನ ಅತ್ಯಾಪ್ತ, ಉದ್ಯಮಿ ಬರ್ಬರ ಹತ್ಯೆ

Prasthutha|

ಹಾಸನ: ಮಾಜಿ ಸಚಿವ ಹೆಚ್.ಡಿ.ರೇವಣ್ಣನ ಅತ್ಯಾಪ್ತ ಗ್ರಾನೈಟ್ ಉದ್ಯಮಿಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.

- Advertisement -


ಕೃಷ್ಣೇಗೌಡ(53) ಅವರನ್ನು ಗ್ರಾನೈಟ್ ಫ್ಯಾಕ್ಟರಿ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.


ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೃಷ್ಣೇಗೌಡನನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

- Advertisement -


ಘಟನಾ ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಹಾಸನ ಕ್ಷೇತ್ರದ JDS ಶಾಸಕ ಸ್ವರೂಪ್ ಪ್ರಕಾಶ್ ಅವರು ಕೂಡ ಆಗಮಿಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Join Whatsapp