ಕರಾವಳಿಯ ಮೀನುಗಾರರಿಗೆ ವಿಶೇಷ ಪ್ಯಾಕೇಜ್ ನೀಡಲು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಒತ್ತಾಯ

Prasthutha|

ಮಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿರುವ ಪ್ಯಾಕೇಜನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಟೀಕಿಸಿದ್ದು, ಮುಖ್ಯಮಂತ್ರಿಗಳ ಪ್ಯಾಕೇಜ್ ನಲ್ಲಿ ಮೀನುಗಾರರಿಗೆ ಏನೂ ಘೋಷಣೆ ಮಾಡಲಿಲ್ಲ. ಕರಾವಳಿಯ ಮೀನುಗಾರರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.  

- Advertisement -

ಮಂಗಳೂರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಪ್ಯಾಕೇಜ್ ನಲ್ಲಿ ಮೀನುಗಾರರಿಗೆ ಏನೂ ಘೋಷಣೆ ಮಾಡಿಲ್ಲ, ಸಾಲ ಮಾಡಿದ ಎಲ್ಲಾ ವರ್ಗದ ಜನರು ಕಷ್ಟದಲ್ಲಿದ್ದಾರೆ. ಮತೀಯ ಮಾರ್ಗದಲ್ಲಿ ಮೀನುಗಾರರ ಮತ ಪಡೆದ ಬಿಜೆಪಿಯು ಅವರಿಗೆ ಪ್ಯಾಕೇಜ್ ನೀಡದೆ ಕಡೆಗಣಿಸಿದೆ. ಸಂಕಷ್ಟದಲ್ಲಿರುವ ಈ ಸಮಯದಲ್ಲಿ ಸಾಲ ಮಾಡಿದ ಮೀನುಗಾರರ ಸಾಲ ಮನ್ನಾ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಮೀನುಗಾರರಿಗೆ ಸಹಾಯ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

Join Whatsapp