ಸ್ವಾತಂತ್ರ್ಯ ದಿನಕ್ಕೂ ಮುನ್ನ ಬೊಮ್ಮಾಯಿ ಬದಲಾವಣೆಗೆ ವರಿಷ್ಠರ ‍ಚಿಂತನೆ: ಮಾಜಿ ಶಾಸಕ ಸುರೇಶ್ ಗೌಡ

Prasthutha|

ಬೆಂಗಳೂರು: ಸ್ವಾತಂತ್ರ್ಯ ದಿನೋತ್ಸವಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬದಲಾಯಿಸಲು ಬಿಜೆಪಿ ವರಿಷ್ಠರು ತೀವ್ರವಾಗಿ ಚಿಂತನೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಹೇಳಿದ್ದಾರೆ

- Advertisement -

ಸುದ್ಧಿಗಾರರೊಂದಿಗೆ ಮಾತಾಡಿದ ಅವರು ‘ ಕೆಲವು ರಾಜ್ಯಗಳಲ್ಲಿ ಚುನಾವಣೆ ಬಹಳ ಹತ್ತಿರ ಇರುವಾಗಲೂ ಮುಖ್ಯಮಂತ್ರಿ ಬದಲಾವಣೆ ಮಾಡಿದ ಹಲವು ಉದಾಹರಣೆಗಳಿವೆ. ರಾಜ್ಯದಲ್ಲೂ ಸ್ವಾತಂತ್ರ್ಯ ದಿನಕ್ಕೂ ಮುಂಚಿತವಾಗಿಯೇ ಮುಖ್ಯಮಂತ್ರಿಯನ್ನು ಬದಲಾಯಿಸುವ ಬಗ್ಗೆ ಬಿಜೆಪಿ ವರಿಷ್ಠರು ಚರ್ಚೆ ನಡೆಸುತ್ತಿದ್ದಾರೆ. ಬೊಮ್ಮಾಯಿ ಅವರು ಒಂದು ವರ್ಷದ ಅವಧಿಯಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಿದ್ದರೂ ಹೈ ಕಮಾಂಡ್ ಆದೇಶಕ್ಕೆ ಬದ್ಧವಾಗಲೇಬೇಕು ಎಂದು ಹೇಳಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿಯಾಗುವ ಸುದ್ದಿ ಕೇಳಿ ಬರ್ತಾ ಇದೆ. ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಆದರೆ ಶೋಭಾ ಮುಖ್ಯಮಂತ್ರಿಯಾದರೆ ಸಂತೋಷ ಎಂದು ತಿಳಿಸಿದರು

Join Whatsapp